ಡಿ. 5ರಂದು ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರುದ್ದ ರಾಜ್ಯ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಬಸವ ಕಲ್ಯಾಣ ಕ್ಷೇತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಮಾಡಿದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ರಾಜ್ಯ ವ್ಯಾಪಿ ಬಂದ್ ಗೆ ಕರೆ ನೀಡಿವೆ.


ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಸಲಾದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ಸ್ಥಾಪನೆಯನ್ನು ವಿರೋಧಿಸಿ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಈ ನಿರ್ಧಾರವನ್ನು ಪುನರ್ ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ನೀಡಲಾಗಿದ್ದು, ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ನಿರ್ಧಾರ ಮಾಡಿವೆ.

error: Content is protected !!
Scroll to Top