ಪಂಜ: ಅಕ್ರಮ ಗಣಿಗಾರಿಕೆ ➤ ಎಚ್ಚೆತ್ತುಕೊಳ್ಳದ ಅಧಿಕಾರಿಗಳು..!



(ನ್ಯೂಸ್ ಕಡಬ) newskadaba.com ಪಂಜ, ನ. 18. ತಾಲೂಕಿನ ಸುಬ್ರಹ್ಮಣ್ಯ ವ್ಯಾಪ್ತಿಯ ಯೇನೆಕಲ್ಲು ಬಾನಡ್ಕ ಕಟ್ಟ ಎಂಬಲ್ಲಿ ಸುಮಾರು ಎರಡು ಎಕರೆ ಪ್ರದೇಶದ ಖಾಸಗಿ ಜಾಗದಲ್ಲಿ ಕೆಂಪು ಕಲ್ಲಿನ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಂಡು ಕಾಣದಂತೆ ಕಣ್ಣು ಮುಚ್ಚಿಕೊಂಡಿರುವುದು ವಿಪರ್ಯಾಸವೇ ಸರಿ.





 

 

ಇಲ್ಲಿ ಟಿಪ್ಪರ್ ವಾಹನಗಳ ನಿರಂತರ ಓಡಾಟದಿಂದ ರಸ್ತೆಗಳು ತೀರಾ ಹದಗೆಟ್ಟಿದ್ದು, ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಇಲ್ಲದಂತಾಗಿದ್ದು, ಸಂಬಂಧಪಟ್ಟ ಇಲಾಖೆಗಳು ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.






 

Xl

error: Content is protected !!
Scroll to Top