ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ . 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.

 

 

ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ. ಸದಾನಂದ ಭಂಡಾರಿ ಅವರ ಮೊಬೈಲ್ ಗೆ ಬಂದ ಸಂದೇಶದ ಆಧಾರದಲ್ಲಿ ಅವರ ಖಾತೆಯಿಂದ ಯಾರೋ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಭಂಡಾರಿ ಅವರು ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ.

Also Read  ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ

 

error: Content is protected !!
Scroll to Top