ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ . 20: ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ.

 

 

ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದ ಶ್ರೀರಾಮಕ್ಷೇತ್ರ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರ ಸಹಕಾರದಿಂದ ಸ್ಪಂದಿಸಿ ಈ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.

 

Xl

 

Scroll to Top