ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ



(ನ್ಯೂಸ್ ಕಡಬ) newskadaba.com ಪುತ್ತೂರು . 21: ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದೊಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.







 

 

ಕಳೆದ ಹಲವು ಸಮಯಗಳಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸುತ್ತಮುತ್ತ ತಿರುಗಾಡುತ್ತಿದ್ದು, ರಾತ್ರಿ ವೇಳೆ ಪ್ರಯಾಣಿಕರು ಕುಳಿದುಕೊಳ್ಳುವ ಚಯರ್‍ನಲ್ಲೇ ಮಲಗಿದ್ದರು. ಮಲಗಿದ್ದ ವ್ಯಕ್ತಿ ಬೆಳಗಿನ ಜಾವ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅಪರಿಚಿತರಾಗಿದ್ದ ಹಿನ್ನಲೆಯಲ್ಲಿ ಪೊಲೀಸರು ವ್ಯಕ್ತಿಯ ಕಿಸೆಯಲ್ಲಿದ್ದ ವಿಳಾಸವನ್ನು ನೋಡಿ ಮೃತ ವ್ಯಕ್ತಿ ಮನೆ ಮಂದಿಗೆ ಮಾಹಿತಿ ನೀಡಿದ್ದಾರೆ.






 

Xl

 

error: Content is protected !!
Scroll to Top