ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲಡ್ಕ . 23: ಕಳೆದ ದಿನ ರಾತ್ರಿ ಕಲ್ಲಡ್ಕ ಸಮೀಪದಲ್ಲಿ ನಡೆದ ಓಮ್ನಿ ಹಾಗೂ ಬೈಕ್ ಅಪಘಾತ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕಲ್ಲಡ್ಕ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್(30) ಎಂದು ಗುರುತಿಸಲಾಗಿದೆ.

 

 

ಕಳೆದ ದಿನ ರಾತ್ರಿ ಕ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

error: Content is protected !!

Join the Group

Join WhatsApp Group