ಮಂಗಳೂರು: ಸ್ಕೂಟರ್ ಗೆ ಲಾರಿ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರ ಸ್ಥಳಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಚ್ಚಿಲ . 23: ಇಂದು ಮುಂಜಾನೆ ಉಚ್ಚಿಲ ಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್(65) ಎಂದು ಗುರುತಿಸಲಾಗಿದೆ.

 

Xl

 

ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಚಲಿಸುತ್ತಿದ್ದ ಲಾರಿ ಹಾಗೂ ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ ಈಯೊಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಸ್ತೆಗೆ ಬಿದ್ದ ದ್ವಿಚಕ್ರ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

Also Read  ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

 

error: Content is protected !!
Scroll to Top