ಮಂಗಳೂರು: ಯುವಕನ ಮೇಲೆ ತಲ್ವಾರ್ ದಾಳಿ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ತಲ್ವಾರ್ ದಾಳಿ ನಡೆಸಿದ ಪರಿಣಾಮ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಯೂನಿಟಿ ಆಸ್ಪತ್ರೆಯ ಎದುರುಗಡೆ ನಡೆದಿದೆ.

ಗಾಯಾಳುವನ್ನು ನೌಶಾದ್ (30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳ ಸಹಿತ ಕದ್ರಿ ಪೋಲೀಸ್ ಠಾಣಾ ಇನ್ಸ್‌ಪೆಕ್ಟರ್ ಸವಿತೃ ತೇಜ್ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

Also Read  ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!!

error: Content is protected !!
Scroll to Top