ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ಶಿವಮೊಗ್ಗ ಜಿ.ಪಂ. ಶಿಕಾರಿಪುರ ಕ್ಷೇತ್ರದ ಸದಸ್ಯರಾದ ಮಂಜುನಾಥ ನಾಯ್ಕ್‌ರವರು ಕಡಬದ ಭಾಗೀರಥಿ ಟವರ್ಸ್‌ನಲ್ಲಿರುವ  ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದರು.


ಕಡಬ ಬ್ಲಾಕ್ ಕಾಂಗ್ರೆಸ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಮಾಹಿತಿ ನೀಡಿದರು. ಶಿಕಾರಿಪುರ ಬ್ಲಾಕ್ನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ನಾಯ್ಕ್‌ರವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಪುತ್ತೂರು ಎಪಿಎಂಸಿ ನಿರ್ದೇಶಕ ರಾಮಕೃಷ್ಣ ಹೊಳ್ಳಾರು, ಕಾಂಗ್ರೆಸ್ ಹಿರಿಯ ಮುಖಂಡ ಗುಡ್ಡಪ್ಪ ಗೌಡ ಕಾಪಾರು, ಕಡಬ ಗ್ರಾ.ಪಂ.ಸದಸ್ಯರುಗಳಾದ ಅಶ್ರಫ್ ಶೇಡಿಗುಂಡಿ, ಎ.ಎಸ್.ಶರೀಫ್, ಯುವ ಕಾಂಗ್ರೆಸ್ ಮುಖಂಡ ಸತೀಶ್ ನಾೖಕ್ ಮೇಲಿನಮನೆ, ಶಿರಾಡಿ ಗ್ರಾ.ಪಂ.ಸದಸ್ಯ ಎಂ.ಕೆ.ಪೌಲೋಸ್, ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಚಂದ್ರಶೇಖರ ಕರ್ಕೇರ, ಕಡಬ ಶ್ರೀ ಶ್ರೀಕಂಠಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಗಂಗಾಧರ ನಾೖಕ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group