ಉಡುಪಿ: ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಉಡುಪಿ . 26: ಕರಾವಳಿ ನಗರಿ ಉಡುಪಿಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಳೆದ ದಿನ ನಡೆದಿದೆ.

 

 

ಉಡುಪಿ ತಾಲೂಕಿನ ಮಲ್ಪೆ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನಾ ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಆತನನ್ನು ಕಂಬದಿಂದ ಇಳಿಸಿ ವಿಚಾರಿಸಿದಾಗ ಈತ ಫಕೀರಪ್ಪ ಸವದತ್ತಿ ಮೂಲದವ ಅಲ್ಲದೇ, ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.

 

error: Content is protected !!

Join the Group

Join WhatsApp Group