ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು . 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.

 

 

ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕಳೆದ ದಿನ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಗಿರಿಯಪ್ಪ ಮತ್ತು ಸಿಬ್ಬಂದಿ ವೆಂಕಪ್ಪ ಅವರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Also Read  ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು ಪ್ರಮಾದ ಮುಚ್ಚಿಹಾಕುವ ಪಿತೂರಿ ➤ ಪಾಪ್ಯುಲರ್ ಫ್ರಂಟ್

 

 

error: Content is protected !!
Scroll to Top