ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ



(ನ್ಯೂಸ್ ಕಡಬ) newskadaba.com ಉಳ್ಳಾಲ . 29: ತೊಕ್ಕೊಟ್ಟು ನಾಗನಕಟ್ಟೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ  ನಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.







 

 

ತೊಕ್ಕೊಟ್ಟಿನಿಂದ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್‍ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಾಂಬರು ರಸ್ತೆಯಲ್ಲಿ ಬಿದ್ದಿದ್ದು, ಸ್ಕೂಟರ್ ಸವಾರನಿಗೆ ಗಂಭಿರ ಗಾಯವಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

 

error: Content is protected !!
Scroll to Top