ಮಂಗಳೂರು: ಸ್ಕಾಲರ್ಶಿಪ್ ಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ಅಝಾದ್ ಭವನ್ ಮಾರ್ಚ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲೆ ವತಿಯಿಂದ ಸ್ಕಾಲರ್ ಶಿಪ್ ಮಂಜೂರಾತಿಯಲ್ಲಿ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಹಲವು ಬೇಡಿಕೆಗಳನ್ನು ಆಗ್ರಹಿಸಿ ನಗರದ ಅರ್.ಟಿ.ಒ ಕಛೇರಿಯಿಂದ ಅಝಾದ್ ಭವನಕ್ಕೆ ವಿದ್ಯಾರ್ಥಿಗಳು ಮಾರ್ಚ್ ಮಾಡಿದರು.

 

ಬಳಿಕ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿ.ಜೆ, ಸರಕಾರಕ್ಕೆ ಸ್ಕಾಲರ್ ಶಿಪ್ ಗೆ ನೀಡಲು ಖಜಾನೆಯಲ್ಲಿ ದುಡ್ಡಿಲ್ಲ ಆದರೆ ಮರಾಠ ಪ್ರಾಧಿಕಾರಕ್ಕೆ, ಲಿಂಗಾಯತ ಪ್ರಾಧಿಕಾರಕ್ಕೆ ಕೋಟಿ ಕೋಟಿ ಹಣ ನೀಡುತ್ತಿದ್ದಾರೆ. ಈಗಾಗಲೇ ಶಾಲಾ ಕಾಲೇಜುಗಳು ಆನ್ ಲೈನ್ ಮೂಲಕ ಆರಂಭವಾಗಿದ್ದು, ಶಿಕ್ಷಣ ಸಂಸ್ಥೆಗಳು ದಾಖಲಾತಿ ಶುಲ್ಕವನ್ನು ಒಂದೇ ಕಂತಿನಲ್ಲಿ ಕೇಳುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗಾಗಿ ಕಾಯುತ್ತಿದ್ದು, ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ರಾಜ್ಯ ಉಪಾಧ್ಯಕ್ಷೆ ಮುಫೀದಾ ರಹಮಾನ್ ಮಾತನಾಡಿ ‘ಮಂಗಳೂರಿನ ಮೌಲಾನಾ ಅಝಾದ್ ಭವನದ ಕೆಲ ಸಿಬ್ಬಂದಿಗಳು ಸ್ಕಾಲರ್ ಶಿಪ್ ವಂಚಿತ ವಿದ್ಯಾರ್ಥಿಗಳೊಂದಿಗೆ ಬೇಜವಾಬ್ದಾರಿಯ ವರ್ತನೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು‌. ಅಲ್ಲದೇ ಸರಕಾರ ವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆ ಮಾಡಬೇಕು ಮತ್ತು ಕಡಿತಗೊಳಿಸಿರುವ ಪಿ.ಹೆಚ್.ಡಿ, ಎಂ.ಫಿಲ್ ಫೆಲೋಶಿಪ್ ಮುಂದುವರಿಸಬೇಕು, ಇಲ್ಲದಿದ್ದರೆ ಕಾಲೇಜು ಆರಂಭವಾದ ನಂತರ ಜಿಲ್ಲಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಟ ಮಾಡಲಾಗುವುದು ಎಂದರು.

Also Read  ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ

 

ಅಧಿಕಾರಿಗಳಿಂದ ವಿದ್ಯಾರ್ಥಿ ಮುಖಂಡರೊಂದಿಗೆ ಸಭೆಗೆ ಆಹ್ವಾನ- ಕ್ಯಾಂಪಸ್ ಫ್ರಂಟ್ ನಾಯಕರ ಮನವಿಯನ್ನು ಪಡೆಯಲು ಬಂದ ಕಛೇರಿಯ ಅಧಿಕಾರಿಗಳು ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಉನ್ನತ ಅಧಿಕಾರಿಗಳೊಂದಿಗೆ ಸಭೆ ಏರ್ಪಡಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹಸನ್ ಸಿರಾಜ್, ಕಾರ್ಯದರ್ಶಿ ಮುನೀರ್ ಬಜಾಲ್, ಜಿಲ್ಲಾ ಮುಖಂಡ ತಾಜುದ್ದೀನ್, ಮಂಗಳೂರು ಏರಿಯಾ ಅಧ್ಯಕ್ಷೆ ಮುರ್ಶಿದಾ ಉಪಸ್ಥಿತರಿದ್ದರು.

Also Read  ? ಕಾಟಿಪಳ್ಳ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ➤ 9 ಮಂದಿ ಆರೋಪಿಗಳ ಬಂಧನ

 

error: Content is protected !!
Scroll to Top