ಮಣಿಪಾಲ ಸಮೀಪ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ ➤ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಣಿಪಾಲ ಡಿ. 01: ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು ಬಹಳಷ್ಟು ಆಸ್ತಿಪಾಸ್ತಿ ನಷ್ಟವಾಗುವುದು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದೆ. ಕಳೆದ ದಿನ ಹತ್ತು ಗಂಟೆ ಸುಮಾರಿಗೆ ಮಣಿಪಾಲ ಅಲೆವೂರು ರಸ್ತೆಯ ದುಗ್ಲಿ ಪದವು ಎಂಬಲ್ಲಿ ಆಕಸ್ಮಿಕ ಬೆಂಕಿಬಿದ್ದಿದೆ.

ಈ ಪ್ರದೇಶದಲ್ಲಿ ಬಹಳಷ್ಟು ಜನವಸತಿ ಇದ್ದು 10.30 ಗಂಟೆಗೆ ಬೆಂಕಿಬಿದ್ದಾಗ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರಾದ ಅಲೆವೂರಿನ ಜಲೇಶ್ ಶೆಟ್ಟಿ ಮತ್ತು ಕುಕ್ಕಿಕಟ್ಟೆಯ ನವೀನ್ ಸೇರಿಗಾರ್ ಕೂಡಲೇ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಮಾತ್ರವಲ್ಲ,ಈ ಯುವಕರು ಸ್ಥಳೀಯರನ್ನು ಎಬ್ಬಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ. ಯುವಕರ ಸಮಯಪ್ರಜ್ಞೆಯಿಂದ ಬಹಳ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

Also Read  ➤ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ

 

 

error: Content is protected !!
Scroll to Top