ಉಳ್ಳಾಲ: ನೀರಿನ ಟ್ಯಾಂಕರ್ ಹರಿದು ಗಂಭೀರ ಗಾಯಗೊಂಡಿದ್ದ 5 ವರ್ಷದ ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್‌ನ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಕಳೆದ ದಿನ ಮೃತಪಟ್ಟಿದೆ.

ಸೋಮವಾರ ಸಂಜೆ ತಾಯಿ ಮತ್ತು ಸಹೋದರ, ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಬಾಲಕ ಕೃಷ್ಣ ಗಂಭೀರ ಗಾಯಗೊಂಡಿದ್ದ. ತಕ್ಷನ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತಸೆ ಫಲಕಾರಿಯಾಗದೇ ಬಾಲಕ ಕಳೆದ ದಿನ ಆಸ್ಪತ್ರೆಯಲ್ಲಿ ಮೂತಪಟ್ಟಿದೆ ಎಂದು ತಿಳಿದು ಬಂದಿದೆ. ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್‌ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿ ಪುತ್ರ ಕೃಷ್ಣ ಮೃತಪಟ್ಟ ಬಾಲಕ ಬಾಲಕ. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Also Read  ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ

 

 

error: Content is protected !!
Scroll to Top