ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಮಬೈಲು ಸಮೀಪ ಕಳೆದ ದಿನ ಅಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

 

 

ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Scroll to Top