ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ.

 

ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ 12:30ರ ಸುಮಾರಿಗೆ ಬ್ಲಡ್ ಡೋನರ್ಸ್ ಸಂಸ್ಥೆಗೆ ಮಾಹಿತಿ ಲಭಿಸಿತು. ವೈದ್ಯರು ರಾತ್ರಿ ಸರಿಸುಮಾರು ಒಂದು ಗಂಟೆಗೆ ಸರಿಯಾಗಿ ರೋಗಿಗೆ ಓಪನ್ ಹಾರ್ಟ್ ಶಸ್ತ್ರ ಚಿಕಿತ್ಸೆ ನಡೆಯಲಿರುವುದರ ಬಗ್ಗೆ ಮಾಹಿತಿ ನೀಡಿದರು. ಕೂಡಲೇ ಕಾರ್ಯಪ್ರವೃತ್ತರಾದ ಬ್ಲಡ್ ಡೋನರ್ಸ್ ಸಂಸ್ಥೆ, ಸಂಸ್ಥೆಯ ಸದಸ್ಯರಾದ ಇಬ್ರಾಹಿಂ ಅಮೀರ್ ಕೆ.ಸಿ. ರೋಡ್, ಶಬೀರ್ ತಲಪಾಡಿ, ಹಮೀದ್ ಕಲ್ಲರಕೋಡಿ ಇವರನ್ನು ಸಂಪರ್ಕಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದರು. ಮನವಿಗೆ ಒಪ್ಪಿಕೊಂಡ ಸದಸ್ಯರನ್ನು ಕರೆದುಕೊಂಡು ಬಂದು ರಕ್ತದಾನ ಮಾಡಿಸಲಾಗಿದೆ. ಮಧ್ಯರಾತ್ರಿ 1 ಗಂಟೆ ವೇಳೆಗೆ ಕಾರ್ಯ ನಿರ್ವಹಿಸಿ ರಕ್ತದಾನ ಮಾಡಿರುವ ಯುವಕರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Also Read  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

error: Content is protected !!
Scroll to Top