ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 07: ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.

 

ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು ಕೇವಲ‌ ಒಂದು ದಿನದ ಹೋರಾಟ ಅಲ್ಲ‌. ಗೆಲುವು ಸಿಗುವವರೆಗೆ ನಮ್ಮ‌ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ.ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಸತ್ಯಜಿತ್ ಸುರತ್ಕಲ್ ಹೇಳಿದರು.

Also Read  ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

 

error: Content is protected !!
Scroll to Top