ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ.

ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

 

error: Content is protected !!

Join the Group

Join WhatsApp Group