ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.11: ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ.ಆಹಾರ ಇಲಾಖೆ ಈ ನೂತನ ಆದೇಶ ಜಾರಿಗೆ ತಂದಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

 

Also Read  ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

error: Content is protected !!
Scroll to Top