ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

 

ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು ಕಳೆದ ಒಂದು ವರ್ಷದ ಹಿಂದೆ ಹಳೆಯಂಗಡಿ ಸಮೀಪದ ಪಡು ಪಣಂಬೂರಿನ ಬೆಳ್ಳಾಯರು ಕಲ್ಲಾಪು ಬಳಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಡುಪಣಂಬೂರು ಪರಿಸರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ನೆರೆ ಮನೆಯವರು ಶಂಕಿಸಿದ್ದಾರೆ. ಕಳೆದ ಎರಡು ದಿನಗಳಿಂದ ವಿನೋದ್ ಸಾಲ್ಯಾನ್ ಕುಟುಂಬದ ಮಂದಿ ಹೊರಗೆ ಬರದೇ ಇದ್ದುದನ್ನು ಕಂಡು ಮನೆಯ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

error: Content is protected !!

Join the Group

Join WhatsApp Group