ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.15: ಅಗಲಿದ ಹಿರಿಯ ಚೇತನಗಳಿಗೆ ನಾಗರಿಕ ಸಮಿತಿಯಿಂದ ನುಡಿನಮನ, ಶ್ರದ್ಧಾಂಜಲಿ ಸಲ್ಲಿಸಿದರು

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಅಗಲಿದ ಉಡುಪಿ ಜಿಲ್ಲೆಯ ಹಿರಿಯ ಚೇತನಗಳಾದ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ, ಸಾಮಾಜಿಕ ಹೋರಾಟಗಾರ ದಾಮೋದರ ಐತಾಳ್, ಸಾಹಿತಿ ಉದ್ಯಾವರ ಮಾಧವ ಆಚಾರ್ಯ, ಮಕ್ಕಳ ಹಕ್ಕುಗಳ ಹೋರಾಟಗಾರ ದಾಮೋದರ ಆಚಾರ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುವ ಕಾರ್ಯಕ್ರಮ ಉಡುಪಿ ಮಾರುತಿ ವೀಥಿಕಾದ ನಾಗರಿಕ ಸಮಿತಿಯ ಕಚೇರಿ ವಠಾರದಲ್ಲಿ ನಡೆಯಿತು.ಅಗಲಿದ ಗಣ್ಯರಿಗೆ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ನುಡಿನಮನ ಸಲ್ಲಿಸಿದರು.

Also Read   ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ !

error: Content is protected !!
Scroll to Top