ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು.

ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

Also Read  ಕೊಂಬಾರು ಗ್ರಾಮಸ್ಥರಿಗೆ ಕೊನೆಗೂ ಬಂತು ನೆಟ್ವರ್ಕ್ ಭಾಗ್ಯ ➤ ಕೊಂಬಾರು ಹಾಗೂ ಸಿರಿಬಾಗಿಲಿನಲ್ಲಿ ಜಿಯೋ ಟವರ್ ಗೆ ಸಾಂಕೇತಿಕ ಚಾಲನೆ

error: Content is protected !!
Scroll to Top