ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

 

ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ ಜನವರಿಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ನೂಜಿಬಾಳ್ತಿಲ ಗ್ರಾಮದ ದಿ.ಶಶಿಮಾಧವನ್ ಹಾಗೂ ವಿಜಯಕುಮಾರಿ ದಂಪತಿಗಳ ಪುತ್ರನಾಗಿರುವ ದಿಲೀಪ್ ವೇದಿಕ್ ಅವರು ಇವರೆಗೆ ಅನೇಕ ಪ್ರಶಸ್ತಿ, ಬಿರುದು, ಪುರಸ್ಕಾರ, ಬಹುಮಾನ, ಗೌರವಗಳಿಗೆ ಪಾತ್ರರಾಗಿದ್ದಾರೆ.

error: Content is protected !!

Join the Group

Join WhatsApp Group