ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಎರಡೂವರೆ ವರ್ಷಗಳ ಹಿಂದೆ ಬಂಟ್ವಾಳದ ಮಣಿಹಳ್ಳದಲ್ಲಿ ಮಧ್ಯರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದು ಹಾಗೂ ಹಲ್ಲೆ ನಡೆಸಲು ಬಂದ ಪ್ರಕರಣಕ್ಕೆ ಸಂಬಂಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೋಮವಾರ ತೀರ್ಪು ನೀಡಿದ್ದು, ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 3 ಸಾವಿರ ರೂ. ದಂಡ ವಿಧಿಸಿದ್ದಾರೆ.

ಮಾರಿಪಳ್ಳ ನಿವಾಸಿ ಸದ್ದಾಂ ಹುಸೈನ್, ಕುಪ್ಪೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಶಿಕ್ಷೆಗೊಳಪಟ್ಟವರು. ಮತ್ತೋರ್ವ ಆರೋಪಿ ಮಹಮ್ಮದ್ ಮುಕ್ಸೀನ್ ಕೋರ್ಟ್ ಜಾಮೀನು ಪಡೆದು ಬಳಿಕ ಹಾಜರಾಗದೆತಲೆಮರೆಸಿಕೊಂಡಿದ್ದು,ಅತನ ವಿಚಾರಣೆ, ಶೋಧ ಇನ್ನೂ ಮುಂದುವರಿದಿದೆ.

 

Also Read  ಲೋಕಾಯುಕ್ತರ ಭೇಟಿ ➤ ದೂರು ಅರ್ಜಿ ಸ್ವೀಕಾರ

error: Content is protected !!
Scroll to Top