ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

 

ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಮುಂಬೈ ಮಾದರಿಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು ಎಂದಿದ್ದಾರೆ.

 

Scroll to Top