ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಪ್ರತಿಷ್ಠಾ ವರ್ಧಂತ್ಯುತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 22. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.

 


ಈ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮಂಗಳವಾರ ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ದೈವಗಳಿಗೆ ಶುದ್ಧಿ ಕಲಶ ಹಾಗೂ ತಂಬಿಲ ಸೇವೆ ಮತ್ತು ನಾಗತಂಬಿಲ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ, ತಾ.ಪಂ. ಸದಸ್ಯ ಗಣೇಶ್ ಕೈಕುರೆ, ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ ದುಗ್ಗಣ್ಣ ಗೌಡ ಹೊಸಮನೆ, ಸೇರಿದಂತೆ ಪರಿಚಾರಕ ವರ್ಗ, ಆಡಳಿತ ಸಮಿತಿ, ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

Also Read  ಬೈಕ್ ಅಪಘಾತ: ಯುವಕ ಮೃತ್ಯು..!

error: Content is protected !!
Scroll to Top