ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.24: ಬಂಟ್ವಾಳದ ಸಿದ್ಧಕಟ್ಟೆಯ ಆಟೋ ಚಾಲಕ ಶ್ರೀಧರ್ (36) ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ.

ವೈಯಕ್ತಿಕ ಕಾರಣದಿಂದ ಅವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಅವರ ಪತ್ನಿ, ಮಕ್ಕಳು ತವರಿಗೆ ಹೋಗಿದ್ದರು. ಬುಧವಾರ ಬೆಳಗ್ಗೆ ಶ್ರೀಧರ್ ಅವರು ಮನೆಯ ಸಿಟೌಟ್ ನಲ್ಲಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

 

error: Content is protected !!

Join the Group

Join WhatsApp Group