ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .!

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಡಿ.24:ಬಾರೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಕಳ ಸಮೀಪದ ನಿಟ್ಟೆ ನಿವಾಸಿ ಸುರೇಶ್ ಶೆಟ್ಟಿ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,ಇವರು ಪಡುಬಿದ್ರಿ ಡೌನ್ ಟೌನ್ ಬಾರಿನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಪಡುಬಿದ್ರಿ ಸಮೀಪದ ಅಡ್ವೆಯ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

 

 

error: Content is protected !!
Scroll to Top