ಪಡುಬಿದ್ರೆ :ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26:ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ.ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.

Also Read  ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

 

error: Content is protected !!
Scroll to Top