ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27:  ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ನಡೆದ ವಾಗ್ವಾದ‌ ನಡೆದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳದ ಹೊಸ ಬಸ್ ಸ್ಟ್ಯಾಂಡ್ ವಠಾರದಲ್ಲಿ ಈ ಘಟನೆ ನಡೆದಿದೆ.

 

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಬಸ್ಸು ನಿಲ್ಲಿಸಿದ ಜಾಗಕ್ಕೆ ಸಂಬಂಧಿಸಿದಂತೆ ಸರಕಾರಿ ಬಸ್ ಚಾಲಕರು ಮತ್ತು ರಿಕ್ಷಾ ಚಾಲಕರ ಮದ್ಯೆ ವಾಗ್ವಾದ ನಡೆದಿತ್ತು. ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟವಾಗಿದೆ .ಆ ನಂತರ ಸರಕಾರಿ ಬಸ್ಸು ಚಾಲಕರು ನಿರ್ವಾಹಕರು ಸೇರಿಕೊಂಡು ರಿಕ್ಷಾ ಚಾಲಕರಿಗೆ ಥಳಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ರಿಕ್ಷಾ ಚಾಲಕ ಹಾಗೂ ಸರಕಾರಿ ಬಸ್ ಚಾಲಕರಿಬ್ಬರ ಕಡೆಯಿಂದಲೂ ಧರ್ಮಸ್ಥಳ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

error: Content is protected !!

Join the Group

Join WhatsApp Group