ಸಿಇಟಿ ಕೌನ್ಸೆಲಿಂಗ್ ಅವಧಿ ಜ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01.  ರಾಜ್ಯದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರ ತನಕ ಕಾಲಾವಕಾಶವನ್ನು ವಿಸ್ತರಣೆ ಮಾಡಿ ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌‌.ಅಶ್ವತ್ಥ್‌‌‌‌ ನಾರಾಯಣ ಹೇಳಿದ್ದಾರೆ.

 

 

“ಈ ಹಿನ್ನೆಲೆ ಇನ್ನೊಂದು ಸುತ್ತಿನ ಕೌನ್ಸೆಲಿಂಗ್‌‌‌ ನಡೆಸಲಾಗುವುದು. ಇದರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೌನ್ಸೆಲಿಂಗ್‌  ಶೀಘ್ರದಲ್ಲೇ ಪ್ರಕಟಿಸಲಿದೆ” ಎಂದಿದ್ದಾರೆ.

 

Scroll to Top