ಕುಮಾರಧಾರ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಪುನರಾರಂಭ

(ನ್ಯೂಸ್ ಕಡಬ) newskadaba.com ಕಾಣಿಯೂರು, ಜ. 01. ಕುಡಿಯುವ ನೀರಿನ ಯೋಜನೆಗಾಗಿ ಕಡಬ ತಾಲೂಕಿನ ಶಾಂತಿಮೊಗರಿನ ಕುಮಾರಾಧಾರ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಯು ಪುನರಾರಂಭಗೊಂಡಿದೆ.

ತಾಲೂಕಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣ್ಚಪ್ಪಾಡಿ, ಆಲಂಕಾರು, ಪೆರಾಬೆ ಹಾಗೂ ಕುಂತೂರು ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ಬರುವ ಮೇ ತಿಂಗಳೊಳಗೆ ಕಾಮಗಾರಿಯು ಪೂರ್ಣವಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

error: Content is protected !!

Join the Group

Join WhatsApp Group