ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಜ.04. ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ತಮಿಲಕುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.

ಯುವತಿಯು ಶೋಲಾವರಂನಲ್ಲಿನ ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ಅಲ್ಲಿದ್ದ ಅಜಿತ್ ಎಂಬಾತನು ಆಕೆಯ ಅತ್ಯಾಚರಾಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆಕೆ ವಿರೋಧಿಸಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದು, ಈ ಸಂದರ್ಭ ಆತನಿಂದ ಚಾಕುವನ್ನು ಕಸಿದು ಆತನ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಅಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

error: Content is protected !!
Scroll to Top