ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆಗೈದ ಬಾಲಕ

(ನ್ಯೂಸ್ ಕಡಬ) newskadaba.com ಕಾನ್ಪುರ, ಜ. 04. ಹೊಸ ಮೊಬೈಲ್ ಕೊಡಿಸಲಿಲ್ಲವೆಂಬ ಬೇಸರದಲ್ಲಿ ಅಪ್ರಾಪ್ತ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ.

ಮೃತ ಬಾಲಕನು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದು, ಹಣಕಾಸಿನ ಸಮಸ್ಯೆಯಿರುವುದರಿಂದ ಕೆಲವು ದಿನಗಳ ಬಳಿಕ ಹೊಸ ಫೋನ್ ಕೊಡಿಸುವುದಾಗಿ ತಂದೆ ಹೇಳಿದ್ದರು. ಆದರೆ ಇದಕ್ಕೆ ಒಪ್ಪದ ಮಗ ಆಕ್ರೋಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

error: Content is protected !!

Join the Group

Join WhatsApp Group