ಬಲ್ಯ: ತೀವ್ರ ಅಸೌಖ್ಯದಿಂದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.04. ಅಲ್ಪ ಕಾಲದ ಅಸೌಖ್ಯದಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರದಂದು ಬಲ್ಯದಿಂದ ವರದಿಯಾಗಿದೆ.

ಮೃತ ಯುವಕನನ್ನು ಕಡಬ ತಾಲೂಕು ಬಲ್ಯ ಗ್ರಾಮದ ಮಂಜಯ್ಯ ಗೌಡ ಎಂಬವರ ಪುತ್ರ ಮೋಹನ್ ನೆಲ್ಲ(29) ಎಂದು ಗುರುತಿಸಲಾಗಿದೆ. ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಇವರು ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

error: Content is protected !!

Join the Group

Join WhatsApp Group