ಕೃಷಿ ಮಸೂದೆ ವಿರುದ್ದದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05 ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಯನ್ನು ವಿರುದ್ದ ಪ್ರತಿಭಟಿಸುತ್ತಿರುವ ರೈತರು 41 ದಿನಕ್ಕೆ ಕಾಲಿಟ್ಟಿದ್ದು, ಈ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ತಿಳಿಸಿದ್ದಾರೆ.

 

ಈ ಕುರಿತು ಟ್ವೀಟ್ ಮೂಲಕ “ಕೇಂದ್ರ ಸರ್ಕಾರದ ಕೃಷಿ ಮಸೂದೆಯ ವಿರುದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ 50 ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದು, ಕಾಂಗ್ರೆಸ್‌ ನ ಎಲ್ಲ ಮುಖಂಡರು ಸೇರಿ ಅವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುತ್ತಿದ್ದೇವೆ” ಎಂದರು.

error: Content is protected !!

Join the Group

Join WhatsApp Group