ಬೆಳ್ತಂಗಡಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಠಾಣೆಗೆ ಮುತ್ತಿಗೆ ಹಾಕಿದ ಎಸ್ಡಿಪಿಐ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಪಾಕಿಸ್ತಾನದ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ದ ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂದಿಸಿಲ್ಲ ಎಂದು ಎಸ್ಡಿಪಿಐ ಕಾರ್ಯಕರ್ತರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಠಾಣೆಯ ಎದರು ನೂರಾರು ಜನ ಜಮಾಯಿಸಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಈ ಸಂದರ್ಭ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ ಫ್ರಾಂಕೊ, ದ.ಕ. ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಆಂಟನಿ, ವಿಧಾನಸಭಾ ಸಮಿತಿ ಸದಸ್ಯ ನವಾಝ್ ಕಟ್ಟೆ ಮೊದಲಾದವರು ಭಾಗವಹಿಸಿದ್ದರು.

Also Read  ಬಿಳಿನೆಲೆ -ಕೈಕಂಬ :ರಾಂಪತ್ರೆ ಕೊಯ್ಯಲು ಕಾಡಿಗೆ ತೆರಳಿದ್ದ ವ್ಯಕ್ತಿ ವಾರದ ಬಳಿಕ ಶವವಾಗಿ ಪತ್ತೆ ➤ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ

error: Content is protected !!
Scroll to Top