ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ.


ಇನ್ನು ಮುಂದೆ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಯಾಂಡಲ್ ಸೋಪ್, ಅಡುಗೆ ಎಣ್ಣೆ ಹಾಗೂ ಉಪ್ಪು ಸಿಗಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಈ ಯೋಜನೆಯನ್ನು ಹಂತ ಹಂತವಾಗಿ ರಾಜ್ಯದಾದ್ಯಂತ ವಿತರಿಸಲಾಗುವುದು ಎಂದಿದ್ದಾರೆ.

Scroll to Top