ಮಂಗಳೂರು: ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಶ್ರೀ ಸಂತೋಷ್ ಪಾಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಕಲಬುರ್ಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಶ್ರೀ ಸಂತೋಷ್ ಪಾಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರ ಸೇವೆ ಶ್ಲಾಘನೀಯ ಹಾಗೂ ಸಮಾಜಮುಖಿ ಸೇವೆಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣೆ ಪಡೆ ಚೀಫ್‌ವಾರ್ಡನ್  ಡಾ||  ಮುರಲೀಮೋಹನ್ ಚೂಂತಾರು ಇವರು ಮಾತನಾಡಿ ಕಲಬುರ್ಗಿ ಜಿಲ್ಲಾ ಸಮಾದೇಷ್ಟರು ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಮತ್ತು ಗೃಹರಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತಾರೆ ಹಾಗೂ ನಮ್ಮ ಜಿಲ್ಲೆಗೆ ಭೇಟಿ ನೀಡಿರುವುದು ನಮಗೆ ತುಂಬಾ ಸಂತಸ ತಂದಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರವೀಣ್ ಜತಿನ್ ಹಾಗೂ ಕಛೇರಿ ಅಧೀಕ್ಷಕರಾದ ಶ್ರೀ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಹಾಗೂ ಹಿರಿಯ ಗೃಹರಕ್ಷಕರಾದ ಭಾಸ್ಕರ್, ರಮೇಶ್ ಭಂಡಾರಿ, ಸುನಿಲ್ ಕುಮಾರ್ ಹಾಗೂ ಗೃಹರಕ್ಷಕ/ ಗೃಹರಕ್ಷಕಿಯರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group