ಪಂಜ: ಬಿಜೆಪಿ ವತಿಯಿಂದ ಪ್ರತಿಜ್ಞಾ ಸಮಾವೇಶ

(ನ್ಯೂಸ್ ಕಡಬ) newskadaba.com ಪಂಜ, ಜ. 09. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಸುಳ್ಯ ಮಂಡಲ ಸಮಿತಿ ವತಿಯಿಂದ ಇಂದು ಪ್ರತಿಜ್ಞಾ ಸಮಾವೇಶವು ಪಂಜದಲ್ಲಿ ನಡೆಯಿತು.

ಇದರ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಜಿಲ್ಲಾ ತಾ.ಪಂ. ಹಾಗೂ ತಾಲೂಕು ಪಂ. ಸದಸ್ಯರು, ವಿವಿಧ ಜನಪ್ರತಿನಿಧಗಳು ಉಪಸ್ಥಿತರಿದ್ದರು.

Scroll to Top