ಮಂಗಳೂರು: ಸತ್ತು ಬಿದ್ದಿರುವ ಮೂರು ಕಾಗೆಗಳ ಮೃತದೇಹ ಪತ್ತೆ ➤ ಹಕ್ಕಿ ಜ್ವರದ ಭೀತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ದೇಶದಾದ್ಯಂತ ಕೊರೊನಾ ಆತಂಕದ ನಡುವೆಯೇ ಹಕ್ಕಿ ಜ್ವರದ ತಂಕವು ಮೂಡಿದ್ದು, ಇದೇ ಸಂದರ್ಭದಲ್ಲಿ ಮಂಗಳೂರು ವಾಮಂಜೂರಿನ ಪಚ್ಚನಾಡಿ ಎಂಬಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ.

ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಸಮೀಪ ರುದ್ರಭೂಮಿಗೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದ ದೃಶ್ಯ ಇಂದು ಬೆಳಗ್ಗೆ ಸ್ಥಳೀಯರಿಗೆ ಕಂಡು ಬಂದಿದೆ. ಇದೀಗ ಮಂಗಳೂರಿನಲ್ಲೂ ಕಾಗೆ ಸತ್ತು ಬಿದ್ದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Also Read  ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

error: Content is protected !!
Scroll to Top