ಕಡಬ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಂಬಾರಿನಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯದ ಕುರಿತು ಪೂರ್ವಭಾವಿ ಸಭೆ

 (ನ್ಯೂಸ್ ಕಡಬ) newskadaba.com ಕಡಬ, ಜ.11. ರಾಜ್ಯ  ಕಾರ್ಯನಿರತ  ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತ ಸಂಘದ ಸಹಯೋಗದಲ್ಲಿ ಕೊಂಬಾರು ಗ್ರಾಮದಲ್ಲಿ ನಡೆಯುವ ಪತ್ರಕರ್ತ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಕೊಂಬಾರು ಸರ್ಕಾರಿ ಶಾಲೆಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಗ್ರಾಮೀಣ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಸದಸ್ಯ  ಲೋಕೇಶ್ ಪೆರ್ಲಂಪಾಡಿ ಮಾತನಾಡಿದರು. ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ,  ಕಾರ್ಯದರ್ಶಿ ವಿಜಯ ಕುಮಾರ್ ಕಡಬ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೆಂದ್ರ ಗೌಡ,  ಶಾಲಾ ಎಸ್.ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಉಪಸ್ಥಿತರಿದ್ದರು.  ಶಾಲಾ ಮುಖ್ಯಶಿಕ್ಷಕ ಚಿದಾನಂದ ಸ್ವಾಗತಿಸಿದರು.   ಗ್ರಾಮದ ವಿವಿಧ ಸಂಘ ಸಂಸ್ಥೆಯ ಮುಖಂಡರು ವಿವಿಧ ಸಮಸ್ಯೆ ಪಟ್ಟಿ ಗಳನ್ನುಹಾಗೂ ಸಲಹೆ ಸೂಚನೆಯನ್ನು ನೀಡಿದರು.

error: Content is protected !!

Join the Group

Join WhatsApp Group