ಕುಣಿಗಲ್ ಸಮೀಪ ರಸ್ತೆ ಅಪಘಾತ ➤ ಪುತ್ತೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.13. ರಸ್ತೆ ಅಪಘಾತದಲ್ಲಿ ಪುತ್ತೂರಿನ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.


ಮೃತ ಯುವಕನನ್ನು ಪುತ್ತೂರಿನ ಗಟ್ಟ ನಿವಾಸಿ ಬಿಲಾಲ್(20) ಎಂದು ಗುರುತಿಸಲಾಗಿದೆ. ಕುಣಿಗಲ್ ಸಮೀಪ ಈತ ಸಂಚರಿಸುತ್ತಿದ್ದ ಬೈಕ್ ಅಪಘಾತವಾಗಿದ್ದು, ಗಂಭೀರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ಮೃತದೇಹವನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

error: Content is protected !!

Join the Group

Join WhatsApp Group