ಶಾಸಕ ಎಸ್.ಅಂಗಾರರು ಸಚಿವರಾಗಿ ಪ್ರಮಾಣ ಸ್ವೀಕರಿಸುವ ಹಿನ್ನೆಲೆ ➤ ಬೆಂಗಳೂರಿಗೆ ತೆರಳಿದ ಕಡಬದ ಪ್ರಮುಖರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸುಳ್ಯ ಶಾಸಕ ಎಸ್.ಅಂಗಾರರವರು ಬುಧವಾರ ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಎಸ್.ಅಂಗಾರರವರು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ನಾರಾಯಣ ಕೇಕಡ್ಕ, ಕಾಂಟ್ರಾಕ್ಟರ್ ಎನ್.ಕೆ.ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group