ಮಂತ್ರಾಲಯಕ್ಕೆ ತೆರಳಲು ಪ್ಲ್ಯಾನ್ ಹಾಕಿದವರಿಗೆ ಶುಭ ಶುದ್ದಿ ➤ ಇಂದಿನಿಂದ ಪ್ರತೀದಿನ ಮಂಗಳೂರಿನಿಂದ ಕೆಎಸ್ಸಾರ್ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, .13. ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಮಂತ್ರಾಲಯಕ್ಕೆ ಕೆಎಸ್ಸಾರ್ಟಿಸಿ ನಾನ್ ಎಸಿ ಸ್ಲೀಪರ್ ಸಾರಿಗೆಯು ಇಂದಿನಿಂದ ಪ್ರಾರಂಭಗೊಳ್ಳಲಿದೆ.

ಮಂಗಳೂರಿನಿಂದ ಉಡುಪಿ-ಕುಂದಾಪುರ-ಹಾಲಾಡಿ-ಸಿದ್ದಾಪುರ-ಮಾಸ್ತಿಕಟ್ಟೆ- ತೀರ್ಥಹಳ್ಳಿ- ಶಿವಮೊಗ್ಗ- ಚೆನ್ನಗಿರಿ- ಹೊಳಲ್ಕೆರೆ- ಚಿತ್ರದುರ್ಗ- ಚಳ್ಳೆಕೆರೆ- ರಾಂಪುರ-ಬಳ್ಳಾರಿ- ಆಲೂರು- ಆದೋನಿ- ಮಾಧವರಂ ಕ್ರಾಸ್ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ನಾನ್ ಎಸಿ ಸ್ಲೀಪರ್ ಸಾರಿಗೆಯು ಇಂದಿನಿಂದ ಪ್ರಾರಂಭಗೊಳ್ಳಲಿದ್ದು, ನೂತನ ಸಾರಿಗೆಯ ಉದ್ಘಾಟನೆಯನ್ನು ಜನವರಿ 14 ರಂದು ಮಧ್ಯಾಹ್ನ 3 ಗಂಟೆಗೆ ದಕ್ಷಿಣ ವಿಧಾನ ಸಭಾ ಶಾಸಕ ವೇದವ್ಯಾಸ ಕಾಮತ್‍ರವರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಆವರಣದಲ್ಲಿ ನೆರವೇರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!

Join the Group

Join WhatsApp Group