ರಾಮ ಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳದಿಂದ 25 ಲಕ್ಷ ➤ ಡಾ| ವಿರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 14. ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳ ಕ್ಷೇತ್ರದಿಂದ 25 ಲಕ್ಷ ರೂಪಾಯಿ ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ನಿಧಿ‌ ಸಮರ್ಪಣೆ ಅಭಿಯಾನದ‌ ಕುರಿತು‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ನಿಧಿ ಸಮರ್ಪಣ ಅಭಿಯಾನ ಆರಂಭವಾಗಿದ್ದು, ಈ ನಿಟ್ಟಿ‌ನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 25 ಲಕ್ಷ ರೂ. ನಿಧಿ‌ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.

Also Read  ರಾಷ್ಟ್ರ ಮಟ್ಟದ ಅಥ್ಲೇಟಿಕ್ಸ್ ಮತ್ತು ಮಾಸ್ಟರ್ ಗೇಮ್ಸ್ ಕ್ರೀಡಾಕೂಟಕ್ಕೆಕಡಬದ ಮೋಹನ್ ಕೆರೆಕೋಡಿ ಆಯ್ಕೆ

error: Content is protected !!
Scroll to Top