ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಂದ ನೂತನ ಸಚಿವ ಎಸ್.ಅಂಗಾರ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ರಾಜ್ಯ ಸರಕಾರದ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಜೊತೆಗೆ ಅವರ ಪತ್ನಿ ಡಾಟಿ ಸದಾನಂದ ಗೌಡ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ಅವರೂ ಕೂಡಾ ಅಭಿನಮದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.

Also Read  ಬೆಂಕಿ ಅವಘಡ: ನಾರಿನ ಘಟಕ ಸಂಪೂರ್ಣ ನಾಶ‌…

error: Content is protected !!
Scroll to Top