ಪಂಜಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

(ನ್ಯೂಸ್ ಕಡಬ) newskadaba.com ಪಂಜ, ಜ. 15. ಇಲ್ಲಿನ ಪಂಜಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಭೇಟಿ ನೀಡಿದ್ದಾರೆ.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಅವರನ್ನು ಶಾಲು ಹೊದಿಸುವ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ ಶಿವರಾಮಯ್ಯ ಕರ್ಮಾಜೆ, ಲಿಗೋಧರ ಆಚಾರ್ಯ, ಕಾರ್ಯಪ್ಪ ಗೌಡ ಚಿದ್ಗಲ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ ರೆಂಜ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Also Read  ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

error: Content is protected !!
Scroll to Top