ಜ. 16 ರಿಂದ 20 ರವರೆಗೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜನವರಿ 16 ರಂದು ಪುತ್ತೂರು ತಾಲೂಕಿನ ಪಾಣಾಜೆ, ಜನವರಿ 19 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಜನವರಿ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.

Also Read  ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‍ಶಿಪ್ ► ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಹಲವು ಪ್ರಶಸ್ತಿ

 


ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top